ಯಾದಗಿರಿ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ ದಿನಾಂಕ 08-07-2019

By blogger on ಸೋಮವಾರ, ಜುಲೈ 8, 2019


ಯಾದಗಿರಿ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ ದಿನಾಂಕ 08-07-2019 

ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ:-108/2019 ಕಲಂ 143, 147, 323, 354, 498(ಎ), 504, 506 ಸಂ 149 ಐಪಿಸಿ:-ಫಿರ್ಯಾಧಿದಾರಳಿಗೆ ಎರಡು ವರ್ಷಗಳ ಹಿಂದೆ ಆರೋಪಿತನ ಜೋತೆಗೆ ಮದುವೆಯಾಗಿದ್ದು, ಸುಮಾರು ಒಂದುವರೆ ವರ್ಷದಿಂದ ಆರೋಪಿತರೆಲ್ಲರೂ ಫಿರ್ಯಾಧಿ ಜೋತೆಗೆ ಜಗಳ ತೆಗೆದು ಅವಾಚ್ಯವಾಗಿ ಬೈದು ಕೈಯಿಂದ ಹೊಡೆಬಡೆ ಮಾಡಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕೊಳ ಕೊಡುತ್ತಿದ್ದು, ದಿನಾಂಕ 29-06-2019 ರಂದು ಸಾಯಂಕಾಲ 5-00 ಗಂಟೆಗೆ ಫಿರ್ಯಾದಿಯು ತನ್ನ ಮನೆಯಲ್ಲಿ ಇರುವಾಗ ಆರೋಪಿತರೆಲ್ಲರೂ ಕೂಡಿಕೊಂಡು ಫಿರ್ಯಾದಿ ಜೋತೆಗೆ ಜಗಳ ತೆಗೆದು ಅವಾಚ್ಯವಾಗಿ ಬೈದು, ಕೈಯಿಂದ ಹೊಡೆಬಡೆ ಮಾಡಿ ಮತ್ತು ಸೀರೆ ಹಿಡಿದು ಎಳೆದಾಡಿ ಮಾನಭಂಗ ಮಾಡಲು ಪ್ರಯತ್ನ ಮಾಡಿ ಜೀವದ ಭಯ ಹಾಕಿರುವ ಬಗ್ಗೆ ಪ್ರಕರಣ ದಾಖಲು ಮಾಡಿದ್ದು ಇರುತ್ತದೆ.

ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ:- 109/2019 ಕಲಂ ಕಲಂ 279, 338 ಐಪಿಸಿ :- ದಿನಾಂಕ: 08-07-2019 ರಂದು 4 ಪಿ.ಎಮ್ ಕ್ಕೆ ಫಿರ್ಯಾಧಿದಾರರಾದ ಶ್ರೀ ಬನ್ನಮ್ಮಾ ಗಂಡ ನಾಗಪ್ಪಾ ಮಾಧವಾರ ವಯಾ:40 ಉ: ಅಂಗನವಾಡಿ ಸಹಾಯಕಿ ಜಾ: ಬೇಡರ್ ಸಾ: ಮದನಪೂರ ಗಲ್ಲಿ ಯಾದಗಿರಿ ಇವರು ಠಾಣೆಗೆ ಹಾಜರಾಗಿ ನೀಡಿದ ಫಿರ್ಯಾಧೀ ಹೇಳಿಕೆಯ ಸಾರಾಂಶವೆನೆಂದರೆ ನಾನು ಈ ಮೇಲ್ಕಂಡ ವಿಳಾಸದಲ್ಲಿ ವಾಸವಾಗಿದ್ದು ಅಂಗನವಾಡಿ ಸಹಾಯಕಿ ಕೆಲಸ ಮಾಡಿಕೊಂಡು ಉಪಜೀವಿಸುತ್ತೆನೆ. ನನ್ನ ಖಾಸ ಅಕ್ಕಳಾದ ಮುದ್ನಾಳ ಗ್ರಾಮದ ಮಹಾದೇವಿ ಇವಳು ಈಗ ಸುಮಾರು 20 ವರ್ಷಗಳ ಹಿಂದೆ ತೀರಿಹೋಗಿದ್ದರಿಂದ ಅವರ ಮಗನಾದ ರವಿ ತಂದೆ ಕ್ರಿಷ್ಣಪ್ಪಾ ವಯಾ: ಸುಮಾರು 25 ವರ್ಷ ಇವನು ಚಿಕ್ಕಂದಿನಿಂದಲೂ ನಮ್ಮ ಮನೆಯಲ್ಲಿಯೇ ಬೆಳೆದಿರುತ್ತಾನೆ. ಅವನು ಈಗ ಸುಮಾರು ವರ್ಷಗಳಿಂದ ಅಟೋ ಓಡಿಸಿಕೊಂಡು ಉಪಜೀವನ ಸಾಗಿಸುತ್ತಾನೆ. ರವಿ ಇತನು ಈಗ ಒಂದು ತಿಂಗಳ ಹಿಂದೆ ಒಂದು ಹೋಸದಾಗಿ ಮೋಟಾರ ಸೈಕಲ್ ಮಾಡಿಕೊಂಡಿರುತ್ತಾನೆ. ಅದಕ್ಕೆ ಇನ್ನೂ ನೊಂದಣಿ ನಂಬರ ಬಂದಿರುವುದಿಲ್ಲಾ. ಅದರ ಚಸ್ಸಿ ನಂಬರ ಒಃಐಊಂಘ091ಏಊಆಂ4393 ಅಂತಾ ಇರುತ್ತದೆ. ದಿನಾಂಕ 07-07-2019 ರಂದು ರವಿ ಇತನು ಸಾಯಂಕಾಲ 5 ಗಂಟೆ ಸುಮಾರಿಗೆ ತನ್ನ ಮೋಟಾರ ಸೈಕಲ್ ಮೇಲೆ ತನ್ನ ಗೆಳೆಯನಾದ ಯೇಸುರಾಜ ಇತನನ್ನು ಕೌಳೂರು ಗ್ರಾಮಕ್ಕೆ ಬಿಟ್ಟು ಬರುವುದಾಗಿ ಹೇಳಿ ಮನೆಯಿಂದ ಮೋಟಾರ ಸೈಕಲ್ ಮೇಲೆ ಹೋದನು. ಅವನು ಹೋದ ನಂತರ ಸಾಯಂಕಾಲ 7-20 ಗಂಟೆ ಸುಮಾರಿಗೆ ರವಿ ಇತನು ನಮಗೆ ಪೋನ ಮಾಡಿ ತಿಳಿಸಿದ್ದೆನೆಂದರೆ  ತಾನು ಯೇಸುರಾಜ ಇತನಿಗೆ ಕೌಳೂರು ಗ್ರಾಮಕ್ಕೆ ಬಿಟ್ಟು ಮರಳಿ ಊರಿಗೆ ಬರುವಾಗ ಮೋಡ ಕವಿದ ವಾತಾವರಣ ಉಂಟಾಗಿದ್ದು ಮಳೆ ಬರಬಹುದು ಅಂತಾ ತಿಳಿದು ವೇಗವಾಗಿ ಯಾದಗಿರಿಗೆ ಬರುವಾಗ ಕೊಯಿಲೂರ ಗೇಟ ಹತ್ತಿರ ಮೋಟಾರ ಸೈಕಲ್ ಸ್ಕೀಡ್ ಆಗಿ ಬಿದ್ದು ಗಾಯಹೊಂದಿರುತ್ತೆನೆ ಅಂತಾ ತಿಳಿಸಿದಾಗ ಕೂಡಲೇ ನಾನು ನನ್ನಕ್ಕ ಶಾಂತಮ್ಮಾ ಇಬ್ಬರೂ ಕೂಡಿ ಒಂದು ಅಟೋ ಮಾಡಿಕೊಂಡು ಅಲ್ಲಿಗೆ ಹೋಗಿ ನೋಡಲಾಗಿ ರವಿ ಇತನು ತಲೆಯ ಹಿಂಬದಿಗೆ, ಭಾರಿ ಗುಪ್ತಗಾಯವಾಗಿ ಕಿವಿಯಿಂದ ರಕ್ತ ಬರುತ್ತಿತ್ತು. ಎಡಮೆಲಕಿಗೆ ಮತ್ತು ಬಲಮುಂಡಿಗೆ ತರಚಿದ ಗಾಯಗಳಾಗಿದ್ದವು. ಅಷ್ಟರಲ್ಲಿ ಕೌಲೂರು ಗ್ರಾಮದಿಂದ ಯೇಸುರಾಜ ಇತನೂ ಕೂಡಾ ಅಲ್ಲಿಗೆ ಬಂದಿದ್ದು ಎಲ್ಲರೂ ಕೂಡಿ ರವಿಗೆ ವಿಚಾರಿಸಲಾಗಿ ರವಿ ಇತನು ಮೇಲಿನಂತೆ ಹೇಳಿದನು. ಆತನಿಗೆ ಕೂಡಲೇ ಉಪಚಾರ ಕುರಿತು ಯಾದಗಿರಿ ಸಕರ್ಾರಿ ಆಸ್ಪತ್ರೆಗೆ ತಂದು ಸೇರಿಕೆ ಮಾಡಿದಾಗ ವೈದ್ಯರು ಹೆಚ್ಚಿನೆ ಉಪಚಾರಕ್ಕೆ ರಾಯಚೂರಿಗೆ ತೆಗದುಕೊಂಡು ಹೋಗಲು ತಿಳಿಸಿದಾಗ ಆತನಿಗೆ ರಾಯಚೂರಿನ ರೀಮ್ಸ ಆಸ್ಪತ್ರೆಗೆ ಅಲ್ಲಿಂದ ಹೆಚ್ಚಿನ ಉಪಚಾರಕ್ಕೆ ಬಳ್ಳಾರಿಯ ವೀಮ್ಸ ಆಸ್ಪತ್ರೆಗೆ ಸೇರಿಕೆ ಮಾಡಿದ್ದು ಇರುತ್ತದೆ. ರವಿ ಇತನು ಈಗ ಮಾತನಾಡುವ ಸ್ಥಿತಿಯಲ್ಲಿಲ್ಲಾ. ಬಳ್ಳಾರಿ ವೀಮ್ಸ ಆಸ್ಪತ್ರೆಯ ವೈದ್ಯರು ರವಿಗೆ ಹೆಚ್ಚಿನ ಉಪಚಾರಕ್ಕೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲು ತಿಳಿಸಿದಾಗ ರವಿಯ ತಂದೆಯಾದ ಕ್ರಿಷ್ಣಪ್ಪಾ  ಮತ್ತು ನಮ್ಮ ಅಕ್ಕಳಾದ ಶಾಂತಮ್ಮಾ ಇವರು ರವಿಗೆ ಬೆಂಗಳೂರಿಗೆ ತೆಗೆದುಕೊಂಡು ಹೋಗಿರುತ್ತಾರೆ. ರವಿ ಇತನಿಗೆ ಆಸ್ಪತ್ರೆಗೆ ತೋರಿಸುವ ಸಲುವಾಗಿ ರಾಯಚೂರು ಮತ್ತು ಬಳ್ಳಾರಿಗೆ ತೆಗೆದುಕೊಂಡು ಹೋಗುವ ಸಲುವಾಗಿ ಫಿರ್ಯಾಧಿ ಕೊಡಲು ತಡವಾಗಿರುತ್ತದೆ. ದಿನಾಂಕ 07-07-2019 ರಂದು 7 ಪಿ.ಎಮ್ ಕ್ಕೆ ರವಿ ಇತನು ತನ್ನ ಮೋಟಾರ್ ಸೈಕಲ್ ಚೆಸ್ಸಿ ನಂ: ಒಃಐಊಂಘ091ಏಊಆಂ4393 ನೆದ್ದನ್ನು ಅತೀವೇಗ ಮತ್ತು ಅಲಕ್ಷ್ಯತನದಿಂದ ಓಡಿಸಿ ಸ್ಕೀಡ್ ಆಗಿ ಬಿದ್ದು ಗಾಯಹೊಂದಿದ್ದು, ಸದರಿ ಘಟನೆ ರವಿ ಇತನ ಅಲಕ್ಷ್ಯತನದಿಂದ ನಿನ್ನೆ 7 ಪಿ.ಎಮ್ ಕ್ಕೆ ಜರುಗಿದ್ದು ಆತನ ವಿರುದ್ದ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಅಂತಾ ನೀಡಿದ ಹೇಳಿಕೆಯ ಸಾರಾಂಸದ ಮೇಲಿಂದ ಠಾಣೆ ಗುನ್ನೆ ನಂ: 109/2019 ಕಲಂ 279,338 ಐಪಿಸಿ ಅಡಿಯಲ್ಲಿ ಗುನ್ನೆ ದಾಖಲಿಸಿಕೊಂಡು ತನಿಖೆ ಕೈಗೊಂಡೆನು.
                                                                                                                      
ಶಹಾಪೂರ ಪೊಲೀಸ್ ಠಾಣೆ ಗುನ್ನೆ ನಂ:- 171/2019.ಕಲಂಃ 78(3) ಕೆ.ಪಿ.ಆ್ಯಕ್ಟ:- ದಿನಾಂಕ 08/07/2019 ರಂದು 20-30 ಗಂಟೆಗೆ ಸ|| ತ|| ಪಿಯರ್ಾದಿ ನಾಗರಾಜ. ಜಿ, ಪಿ.ಐ. ಸಾಹೇಬರು ಠಾಣೆಗೆ ಬಂದು ಒಬ್ಬ ಆರೋಪಿ, ಮುದ್ದೆಮಾಲು, ಜಪ್ತಿಪಂಚನಾಮೆ ಹಾಜರ ಪಡಿಸಿ ವರದಿ ನೀಡಿದ್ದರ ಸಾರಾಂಶವೆನೆಂದರೆ, ಇಂದು ದಿನಾಂಕ 08/07/2019 ರಂದು 17-30 ಗಂಟೆಗೆ ನಾನು ಠಾಣೆಯಲ್ಲಿದ್ದಾಗ ಶಹಾಪೂರದ ಗಾಂದಿಚೌಕ ಹತ್ತಿರ ಇರುವ ಸಾರ್ವಜನಿಕ ಖುಲ್ಲಾ ಜಾಗದಲ್ಲಿ ಒಬ್ಬ ವ್ಯೆಕ್ತಿ ಸಾರ್ವಜನಿಕರಿಗೆ ಕೂಗಿ ಕರೆಯುತ್ತ ಮತ್ತು ಸಾರ್ವಜನಿಕರಿಂದ ಹಣ ಪಡೆದು ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನ್ನು ಬರೆದುಕೊಳ್ಳೂತ್ತಿದ್ದಾನೆ ಅಂತ ಮಾಹಿತಿ ಬಂದಮೇರೆಗೆ ಠಾಣೆಯ ಸಿಬ್ಬಂದಿಯವರಾದ ಬಾಬು ಹೆಚ್,ಸಿ,162, ಶರಣಪ್ಪ ಹೆಚ್,ಸಿ,164, ಗಂಜೇಂದ್ರ ಪಿ,ಸಿ, 313, ಜೀಪ ಚಾಲಕ ನಾಗರೆಡ್ಡಿ ಎ.ಪಿ.ಸಿ.161, ರವರಿಗೆ ಮಾಹಿತಿ ವಿಷಯ ತಿಳಿಸಿ. ಅವರಲ್ಲಿ ಬಾಬು ಹೆಚ್,ಸಿ,162, ರವರಿಗೆ ಇಬ್ಬರು ಪಂಚರನ್ನು ಕರೆದು ಕೊಂಡು ಬರಲು ತಿಳಿಸಿದ್ದರಿಂದ ಸದರಿಯವರು ಇಬ್ಬರು ಪಂಚರಾದ 1] ಶ್ರೀ ಶರಣು ತಂದೆ ಶಿವಪ್ಪ ಅಂಗಡಿ ವ|| 27 ಉ|| ಕೂಲಿ ಕೆಲಸ ಜಾ|| ಲಿಂಗಾಯತ ಸಾ|| ಹಳಿಸಗರ ಶಹಾಪೂರ  2] ಅಂಬಲಪ್ಪ ತಂದೆ ಭೀಮಪ್ಪ ಐಕೂರ ವ|| 49 ಉ|| ಕೂಲಿ ಕೆಲಸ ಸಾ|| ದೇವಿನಗರ ಶಹಾಪೂರ ಇವರನ್ನು ಕರೆದುಕೊಂಡು ಬಂದು ನನ್ನ ಮುಂದೆ 17-50 ಗಂಟೆಗೆ ಹಾಜರಪಡಿಸಿದ್ದು ಸದರಿಯವರಿಗೆ ಬಾತ್ಮಿ ವಿಷಯ ತಿಳಿಸಿ ದಾಳಿಯ ಕಾಲಕ್ಕೆ ನಮ್ಮ ಜೊತೆಯಲ್ಲಿ ಬಂದು ಪಂಚರಾಗಿ ಸಹಕರಿಸಲು ಕೇಳಿಕೊಂಡ ಮೇರೆಗೆ ಪಂಚರಾಗಲು ಒಪ್ಪಿಕೊಂಡರು. ಮಾನ್ಯ ಡಿ,ವೈ,ಎಸ್,ಪಿ, ಸಾಹೇಬರು ಸುರಪೂರ ರವರ ಮಾರ್ಗದರ್ಶನದಲ್ಲಿ ಸದರಿಯವನ ಮೇಲೆ ದಾಳಿ ಮಾಡಲು ನಾನು ಪಂಚರು ಠಾಣೆಯ ಸಿಬ್ಬಂದಿಯವರು ಠಾಣೆಯ ಜೀಪ ನಂ ಕೆಎ-33-ಜಿ-0138 ನ್ನೆದ್ದರಲ್ಲಿ ಕುಳಿತುಕೊಂಡು ಠಾಣೆಯಿಂದ 18-00 ಗಂಟೆಗೆ ಹೊರಟು ಸದರಿ ಜೀಪನ್ನು ನಾಗರೆಡ್ಡಿ ಎ.ಪಿ.ಸಿ., 161, ಇವರು ಚಾಲಾಯಿಸುತ್ತ ನೇರವಾಗಿ ಗಾಂದಿಚೌಕ ಹತ್ತಿರ  ಸ್ವಲ್ಪ ದೂರದಲ್ಲಿ 18-10 ಗಂಟೆಗೆ ಹೋಗಿ ಜೀಪನಿಲ್ಲಿಸಿ ಜೀಪಿನಿಂದ ಎಲ್ಲರು ಇಳಿದು ನಡೆದುಕೊಂಡು ಗಾಂಧಿಚೌಕ ಹತ್ತಿರ ಹೋಗಿ ಮನೆಗಳ ಮತ್ತು ಅಂಗಡಿಗಳ ಗೋಡೆಯ ಮರೆಯಲ್ಲಿನಿಂತು ನಿಗಾಮಾಡಿ ನೊಡಲಾಗಿ ಗಾಂಧಿಚೌಕ ಹತ್ತಿರ ಇರುವ ಸಾರ್ವಜನಿಕ ಖುಲ್ಲಾ ಜಾಗೆಯಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಗೆ ಇದು ಬಾಂಬೆ ಮಟಕಾ 1 ರೂ ಆಡಿದರೆ 80 ರೂಪಾಯಿ ಬರುತ್ತದೆ ಅಂತ ಕೂಗಿ ಕರೆಯುತ್ತ ಮತ್ತು ಸಾರ್ವಜನಿಕರಿಂದ ಹಣ ಪಡೆದು ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನ್ನು ಬರೆದುಕೊಳ್ಳುತಿದ್ದನು ಆಗ ನಾವೆಲ್ಲರೂ ಸದರಿಯವನು ಸಾರ್ವಜನಿಕರಿಂದ ಹಣಪಡೆದು ಮಟಕಾ ಅಂಕಿಗಳನ್ನು ಬರೆದುಕೊಳ್ಳುತ್ತಿದ್ದ ಬಗ್ಗೆ ಖಚಿತಪಡಿಸಿಕೊಂಡು 18-20 ಗಂಟೆಗೆ ನಾವೆಲ್ಲರೂ ದಾಳಿ ಮಾಡಿದಾಗ ಸಾರ್ವಜನಿಕರಿಗೆ ಕೂಗಿ ಹೇಳುತ್ತಾ ಸಾರ್ವಜನಿಕರಿಂದ ಹಣ ಪಡೆದು ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನ್ನು ಬರೆದುಕೊಳ್ಳುತ್ತಿರುವನು ಸಿಕ್ಕಿಬಿದ್ದಿದ್ದು, ಮಟಕಾ ಅಂಕಿಗಳನ್ನು ಬರೆಸಲು ಬಂದ ಜನರು ಓಡಿ ಹೋಗಿರುತ್ತಾರೆ, ನಾನು ಪಂಚರ ಸಮಕ್ಷಮದಲ್ಲಿ ದಾಳಿಯಲ್ಲಿ ಸಿಕ್ಕ ಸದರಿ ವ್ಯಕ್ತಿಯ ಹೆಸರು ವಿಳಾಸ ವಿಚಾರಿಸಲು ಅವನು ತನ್ನ ಹೆಸರು ಹುಸೇನಿ ತಂದೆ ಬಾಬು ಕಾಗಜಗಾರ ವ|| 38 ಜಾ|| ಮುಸ್ಲಿಂ ಉ|| ಕೂಲಿ ಸಾ|| ಕುಂಬಾರ ಓಣಿ ಶಹಾಪೂರ ಅಂತ ಹೇಳಿದನು. ಸದರಿಯವನ ಅಂಗಶೋಧನೆ ಮಾಡಿದಾಗ 1) ನಗದು ಹಣ 340/- ರೂಪಾಯಿ 2) ಒಂದು ಬಾಲ್ ಪೆನ್ ಅಂ:ಕಿ: 00-00 ರೂ 3) 2 ಮಟಕಾ ಅಂಕಿ ಸಂಖ್ಯೆಗಳು ಬರೆದುಕೊಂಡ ಚೀಟಿ ಅಂ:ಕಿ: 00-00 ರೂ ನೇದ್ದವುಗಳನ್ನು ಪಂಚರ ಸಮಕ್ಷಮದಲ್ಲಿ ಒಂದು ಲಕೋಟೆಯಲ್ಲಿ ಹಾಕಿಕೊಂಡು ನಾನು ಮತ್ತು ಪಂಚರು ಸಹಿ ಮಾಡಿದ ಚೀಟಿ ಅಂಟಿಸಿ ತಾಬೆಗೆ ತೆಗೆದುಕೊಂಡೆನು. ಸದರಿ ಜಪ್ತಿ ಪಂಚನಾಮೆಯನ್ನು 18-30 ರಿಂದ 19-30 ರವರೆಗೆ ಜೀಪಿನ ಲೈಟಿನ ಬೆಳಕಿನಲ್ಲಿ ಜಪ್ತಿ ಪಂಚನಾಮೆಮಾಡಿ. ದಾಳಿಯಲ್ಲಿ ಸಿಕ್ಕ ವ್ಯಕ್ತಿಯನ್ನು ತಾಬೆಗೆ ತೆಗೆದು ಕೊಂಡು ಎಲ್ಲರೂ ಕೂಡಿ ಮರಳಿ ಠಾಣೆಗೆ 19-45 ಗಂಟೆಗೆ ಬಂದು ಜಪ್ತಿ ಪಂಚನಾಮೆ, ಮುದ್ದೆಮಾಲನ್ನು ಮತ್ತು ಒಬ್ಬ ಆರೋಪಿಯನ್ನು ಹಾಜರು ಪಡಿಸಿ ಒಂದು ವರದಿಯನ್ನು ತಯಾರಿಸಿ 20-30 ಗಂಟೆಗೆ ಮುಂದಿನ ಕ್ರಮಕೈಕೊಳ್ಳುವಂತೆ ವರದಿ ಹಾಜರಪಡಿಸಿದ್ದು ಸದರಿ ವರದಿಯ ಸಾರಾಂಶವು ಅಸಂಜ್ಞ ಅಪರಾದ ವಾಗಿದ್ದರಿಂದ ಠಾಣೆಯ ಎನ್,ಸಿ,ನಂ 42/2019 ಕಲಂ 78 (3) ಕೆ.ಪಿ.ಯಾಕ್ಟ್ ಪ್ರಕಾರ ದಾಖಲಿಸಿಕೊಂಡು. ಕಲಂ 78 (3) ಕೆ.ಪಿ.ಯಾಕ್ಟ್ ಪ್ರಕಾರ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಳ್ಳಲು ಪರವಾನಿಗೆ ನೀಡುವ ಕುರಿತು. ಮಾನ್ಯ ನ್ಯಾಯಾಲಯಕ್ಕೆ ವಿನಂತಿಸಿಕೊಂಡಿದ್ದು, ನ್ಯಾಯಾಲಯದಿಂದ ರಾಮಪ್ಪ ಪಿ,ಸಿ, 424. ರವರು ನ್ಯಾಯಾಲಯದ ಪರವಾನಿಗೆ ಪಡೆದುಕೊಂಡು 21-00 ಗಂಟೆಗೆ ಬಂದು ಹಾಜರ ಪಡಿಸಿದ್ದರ ಮೇಲಿಂದ  ಶಹಾಪೂರ ಠಾಣೆಯ ಗುನ್ನೆ ನಂ 171/2019 ಕಲಂ 78(3) ಕೆ.ಪಿ.ಆ್ಯಕ್ಟ ನ್ನೆದ್ದರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.



ನಿಮ್ಮ ಅಧಿಕಾರಿಗಳನ್ನು ತಿಳಿಯಿರಿ

ಪೊಲೀಸ್ ಅಧೀಕ್ಷಕರು ಯಾದಗಿರಿ ಜಿಲ್ಲೆ

Rishikesh Bhagawan Sonawane IPS

ಅಧಿಕಾರಿ ಹೆಸರು ದೂರವಾಣಿ ಸಂಖ್ಯೆ
ಡಿ.ಎಸ್.ಪಿ ಶೋರಾಪೂರ ಉಪ-ವಿಭಾಗ 9480803637
ಡಿ.ಎಸ್.ಪಿ ಯಾದಗಿರಿ ಉಪ-ವಿಭಾಗ 9480803526
ಜಿಲ್ಲಾ ಪೊಲೀಸ್ ನಿಸ್ತಂತು ಕೊಣೆ ಯಾದಗಿರಿ 9480803600

ಪ್ರಮುಖವಾದ ಲಿಂಕ್ಗಳು

ಫೋಟೋ ಗ್ಯಾಲರಿ

ಜನಪ್ರಿಯ ಪೋಸ್ಟ್ಗಳು

We are in Facebook

Keep on visiting www.yadgirpolice.in for daily updates from us. .Messege us in facebook

Meet Us in FB!!